6:10 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಕಾರ್ಯಕರ್ತನ ತಲೆಗೆ ಹೊಡೆದ ಡಿಕೆಶಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಏನು ಹೇಳಿದ್ರು ಗೊತ್ತೇ?

11/07/2021, 17:16

ಮಂಗಳೂರು(reporterkarnataka news): ಕಾರ್ಯಕರ್ತನ ತಲೆಗೆ ಬಾರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡತೆ ಸರಿಯಲ್ಲ. ಕಾಂಗ್ರೆಸ್ ಸಂಸ್ಕೃತಿ ಏನು ಅನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರುಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿದ್ರೆ ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಅವರೇ ಎಂದರು.

ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ. ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಆಗ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು ಎಂದು ಅವರು ನುಡಿದರು.

ಇನ್ನು ವಿಧಾನಸೌಧದ ಒಳಗೆ ಸಿದ್ದರಾಮಯ್ಯ ಅವರು ತೊಡೆ ತಟ್ಟಿ ಯುದ್ದಕ್ಕೆ ಕರೆದು ಒಳಹೊಕ್ಕಿದವರು. ದೇವಸ್ಥಾನದ ಆಗಿರುವ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ..? ಎಂದು ನಳಿನ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು