12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/03/2025, 23:48

ಬೆಂಗಳೂರು(reporterkarnataka.com):ಕೆಎಎಸ್ ಮರುಪರೀಕ್ಷೆ ಕೆಎಟಿ ಆದೇಶದ ಮೇಲೆ ಅವಲಂಭಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಹೇಳಿದರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ವಿಪಕ್ಷಗಳ ನಾಯಕರು ಹಾಗೂ ಸದಸ್ಯರು ಕೆಎಎಸ್ ಪ್ರಶ್ನೆಪತ್ರಿಕೆಗಳ ಅನುವಾದಲ್ಲಿ ಉಂಟಾದ ಲೋಪದೋಷಗಳು, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವಲ್ಲಿನ ವಿಳಂಬ ನೀತಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಸುದೀರ್ಘವಾಗಿ ಉತ್ತರಿಸಿದ ಮುಖ್ಯಮಂತ್ರಿಗಳು, ಕೆಎಎಸ್ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಲೋಪದೋಷ ಮರುಪರೀಕ್ಷೆಯಲ್ಲೂ ಕಂಡುಬಂದಿದ್ದು, ಅದನ್ನು ಅಭ್ಯರ್ಥಿಗಳು ಕೆಎಟಿ ಯಲ್ಲಿ ಪ್ರಶ್ನಿಸಿದ್ದಾರೆ. ಮರುಪರೀಕ್ಷೆ ಮಾಡಬೇಕೇ ಅಥವಾ ತರ್ಜುಮೆ ತಪ್ಪಾಗಿರುವ ಪ್ರಶ್ನೆಗಳಿಗೆ ಕೃಪಾಂಕ ನೀಡಬೇಕೆ ಎಂಬುದರ ಕುರಿತು ನ್ಯಾಯಾಲಯ ತೀರ್ಮಾನಿಸಬೇಕಾಗಿದೆ ಎಂದರು.
ಕೆಪಿಎಸ್ ಸಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಅದಕ್ಕೆ ಸಲಹೆ ಸೂಚನೆಗಳನ್ನು ನೀಡಬಹುದೇ ಹೊರತು ನೇರವಾಗಿ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶ ಇರುವುದಿಲ್ಲ. ತರ್ಜುಮೆಯಲ್ಲಿನ ಲೋಪದೋಷಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಗ್ರಾಮೀಣ ಭಾಗದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದನ್ನು ತಡೆಗಟ್ಟಲು ಸರಕಾರವು, ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲಿ ಸಿದ್ದಪಡಿಸಿ ನಂತರ ಆಂಗ್ಲಭಾಷೆಗೆ ತರ್ಜುಮೆ ಮಾಡುವಂತೆ ಕೆಪಿಎಸ್ ಸಿ ಗೆ ಸೂಚಿಸಿದೆ. ಜೊತೆಗೆ ಪ್ರಶ್ನೆಪತ್ರಿಕೆಯನ್ನು ತಪ್ಪಾಗಿ ಭಾಷಾಂತರ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಹ ಸೂಚಿಸಲಾಗಿದೆ. ಕೆಪಿಎಸ್ ಸಿ ಭ್ರಷ್ಟಾಚಾರ ರಹಿತವಾಗಿ, ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು