8:02 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು