3:49 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು