3:39 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು