3:33 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಖಾಸಗಿ ಬಸ್‌ಗಳಿಗೆ ಇನ್ನು ಮುಂದೆ ಡೋರ್ ಕಡ್ಡಾಯ: ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಆದೇಶ

31/08/2023, 10:55

ಮಂಗಳೂರು(reporterkarnataka.com): ಇನ್ನು ಮುಂದೆ ಖಾಸಗಿ ಬಸ್ ಗಳಿಗೆ ಡೋರ್ ಕಡ್ಡಾಯವಾಗಲಿದೆ. ಮಂಗಳೂರು ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ನಗರದ ನಂತೂರಿನಲ್ಲಿ ಖಾಸಗಿ ಸಿಟಿ ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನ ನಿರ್ವಾಹಕ ನಿಧನವಾದ ಹಿನ್ನಲೆಯಲ್ಲಿ ಎಲ್ಲಾ ಖಾಸಗಿ ಬಸ್‌ಗಳಿಗೆ ಇನ್ನು ಡೋರ್ ಕಡ್ಡಾಯವಾಗಿದೆ ಎಂದು ಪೊಲೀಸ್ ಕಮೀಷನರ್ ಆದೇಶ ನೀಡಿದ್ದಾರೆ.
ಕಂಡಕ್ಟರ್ ಸೇರಿ ಯಾರು ಕೂಡಾ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ. ಸಮಯ ಫಾಲೋ ಮಾಡಬೇಡಿ, ಸೇಫ್ಟಿ ಮೊದಲು ಕಾಯ್ದುಕೊಳ್ಳಿ ಎಂದು ಅವರು ತಿಳಿಸಿದ್ದಾರೆ.
ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದೆ. 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಕಂಡಕ್ಟರ್ ಅವರನ್ನು
ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದ್ದರು. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು