4:31 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಖಾಸಗಿ ಲೇಔಟ್‌ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ!

12/11/2024, 00:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ‌ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಈ ಖಾಸಗಿ ಲೇಔಟ್‌ನ್ನು ಜೆಸಿಬಿಯಿಂದ ಸಮತಟ್ಟು ಮಾಡುವ ಸಂದರ್ಭದಲ್ಲಿ ಮರದ ಮುಂಡು, ಮಣ್ಣು, ಕಸಕಡ್ಡಿ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಚಿಟ್ಟೇಬೈಲು ಸಮೀಪ ಕ್ರಿಕೆಟ್ ಮೈದಾನದ ಪಕ್ಕದಲ್ಲಿ ಹಾಕುತ್ತಿದ್ದು ಇದರಿಂದ ಅಕ್ಕಪಕ್ಕದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.


ಈ ಕಸ ಹಾಕಿದ ಜಾಗವು ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಮಾಹಿತಿಯೂ ಕೂಡ ಲಭ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ರಾಶಿ ರಾಶಿ ಘನತ್ಯಾಜ್ಯವನ್ನು ಹಾಕುತ್ತಿರುವುದನ್ನು ತಡೆಯುವಂತೆ ಹಾಗೂ ಸೂಕ್ತ ಕ್ರಮ ಜರುಗಿಸುವಂತೆ ಚಿಟ್ಟೇಬೈಲು ಅಕ್ಕಪಕ್ಕದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು