9:31 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಖಾಸಗಿ ಲೇಔಟ್‌ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ!

12/11/2024, 00:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ‌ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಈ ಖಾಸಗಿ ಲೇಔಟ್‌ನ್ನು ಜೆಸಿಬಿಯಿಂದ ಸಮತಟ್ಟು ಮಾಡುವ ಸಂದರ್ಭದಲ್ಲಿ ಮರದ ಮುಂಡು, ಮಣ್ಣು, ಕಸಕಡ್ಡಿ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಚಿಟ್ಟೇಬೈಲು ಸಮೀಪ ಕ್ರಿಕೆಟ್ ಮೈದಾನದ ಪಕ್ಕದಲ್ಲಿ ಹಾಕುತ್ತಿದ್ದು ಇದರಿಂದ ಅಕ್ಕಪಕ್ಕದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.


ಈ ಕಸ ಹಾಕಿದ ಜಾಗವು ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಮಾಹಿತಿಯೂ ಕೂಡ ಲಭ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ರಾಶಿ ರಾಶಿ ಘನತ್ಯಾಜ್ಯವನ್ನು ಹಾಕುತ್ತಿರುವುದನ್ನು ತಡೆಯುವಂತೆ ಹಾಗೂ ಸೂಕ್ತ ಕ್ರಮ ಜರುಗಿಸುವಂತೆ ಚಿಟ್ಟೇಬೈಲು ಅಕ್ಕಪಕ್ಕದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು