7:31 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ

10/09/2023, 21:37

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್ನು ನಿಯೋಜಿಸಲು ಸರಕಾರ ನಿರ್ಧರಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದು, ಈಗಾಗಲೇ ಬಂದ್​ಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ನಡೆದಿದೆ.
ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೂ ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲು ಕರೆ ನೀಡಲಾಗಿದೆ.
ಬಂದ್ ಸಂದರ್ಭದಲ್ಲಿ ಆಟೋ, ಟ್ಯಾಕ್ಸಿ ಸಿಗದೇ ಜನ ಸಾಮಾನ್ಯರು ಕಷ್ಟ ಪಡಬಾರದು ಎಂದು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬಂದ್ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳನ್ನು ರಸ್ತೆಗಿಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಬಸ್ ಕಾರ್ಯ ನಿರ್ವಹಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಬಿಎಂಟಿಸಿ ಎಂಡಿ, ಕೆಎಸ್‌ಆರ್​​​ಟಿಸಿ ಎಂಡಿ, ಸಾರಿಗೆ ಇಲಾಖೆಯ ಕಮಿಷನರ್ ಹಾಗೂ ‌ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರು ಸಭೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು