8:16 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ

10/09/2023, 21:37

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್ನು ನಿಯೋಜಿಸಲು ಸರಕಾರ ನಿರ್ಧರಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದು, ಈಗಾಗಲೇ ಬಂದ್​ಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ನಡೆದಿದೆ.
ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೂ ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲು ಕರೆ ನೀಡಲಾಗಿದೆ.
ಬಂದ್ ಸಂದರ್ಭದಲ್ಲಿ ಆಟೋ, ಟ್ಯಾಕ್ಸಿ ಸಿಗದೇ ಜನ ಸಾಮಾನ್ಯರು ಕಷ್ಟ ಪಡಬಾರದು ಎಂದು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬಂದ್ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳನ್ನು ರಸ್ತೆಗಿಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಬಸ್ ಕಾರ್ಯ ನಿರ್ವಹಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಬಿಎಂಟಿಸಿ ಎಂಡಿ, ಕೆಎಸ್‌ಆರ್​​​ಟಿಸಿ ಎಂಡಿ, ಸಾರಿಗೆ ಇಲಾಖೆಯ ಕಮಿಷನರ್ ಹಾಗೂ ‌ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರು ಸಭೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು