6:27 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ

10/09/2023, 21:37

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್ನು ನಿಯೋಜಿಸಲು ಸರಕಾರ ನಿರ್ಧರಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದು, ಈಗಾಗಲೇ ಬಂದ್​ಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ನಡೆದಿದೆ.
ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿವರೆಗೂ ನಗರದಲ್ಲಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲು ಕರೆ ನೀಡಲಾಗಿದೆ.
ಬಂದ್ ಸಂದರ್ಭದಲ್ಲಿ ಆಟೋ, ಟ್ಯಾಕ್ಸಿ ಸಿಗದೇ ಜನ ಸಾಮಾನ್ಯರು ಕಷ್ಟ ಪಡಬಾರದು ಎಂದು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬಂದ್ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳನ್ನು ರಸ್ತೆಗಿಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಬಸ್ ಕಾರ್ಯ ನಿರ್ವಹಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಬಿಎಂಟಿಸಿ ಎಂಡಿ, ಕೆಎಸ್‌ಆರ್​​​ಟಿಸಿ ಎಂಡಿ, ಸಾರಿಗೆ ಇಲಾಖೆಯ ಕಮಿಷನರ್ ಹಾಗೂ ‌ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರು ಸಭೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು