12:48 PM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೊಕ್ಕಸವನ್ನು‌ ತುಂಬಿಸುವುದನ್ನು ಬಿಟ್ಟು, ಬಡ ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ: ಸವಾದ್ ಸುಳ್ಯ

30/05/2021, 21:39

ಮಂಗಳೂರು(reporterkarnatakanews): ದೇಶದಾದ್ಯಂತ ಕೊರೊನ ಅಟ್ಟಹಾಸ ಮಾನವ ಸಂಕುಲವನ್ನು ತಲ್ಲಣಗೊಳಿಸಿದ್ದರೆ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿದೆ.ಕಳೆದ ಒಂದು ವರ್ಷವಿಡೀ ಕೇವಲ ಆನ್ ಲೈನ್ ಕ್ಲಾಸ್ ನಡೆಸುವ ಮೂಲಕ ಬಡ ಪೋಷಕರ ಹಣವನ್ನು ಸುಲಿಗೆ ಮಾಡಿ ಅವರ ಜೋಳಿಗೆಯನ್ನು ತುಂಬಿಸಿಕೊಂಡರು.ಫೀಸ್ ಕಟ್ಟದವರನ್ನು ಆನ್ ಲೈನ್ ಕ್ಲಾಸ್ ಗಳಿಗೆ ಕೂಡ ತೆಗೆಯುತ್ತಿಲ್ಲ, ಆದರೆ ಈ ಬಡ ಪೋಷಕರು ಈ ಹಣವನ್ನು ಎಲ್ಲಿಂದ ಭರಿಸುವರೆಂದು ತಿಳಿದುಕೊಳ್ಳುವ ಒಂದು ಸಣ್ಣ ಮನಸ್ಸನ್ನು ಕೂಡ ಇವರು ತೋರಲಿಲ್ಲ. ಇದೀಗ ಕೋವಿಡ್ ಎರಡನೆಯ ಅಲೆ ಲಕ್ಷಾಂತರ ಮನುಷ್ಯ ಜೀವದ ಪ್ರಾಣವನ್ನೇ ತೆಗೆದಿದ್ದರೆ, ಈ ಖಾಸಗಿ ಶಾಲೆಗಳು ಮತ್ತೊಮ್ಮೆ ತಮ್ಮ ಬೊಕ್ಕಸ ತುಂಬಿಸುವ ಪ್ರವೃತಿಯನ್ನು ಪ್ರಾರಂಭಿಸಿದೆ. ಮಕ್ಕಳು ಕಳೆದ ಒಂದು ವರ್ಷದಿಂದ ಮನೆಯಲ್ಲಿಯೇ ಇದ್ದರೂ, ಮತ್ತೊಮ್ಮೆ ಆನ್ ಲೈನ್ ಕ್ಲಾಸ್ ಎಂಬ ಸಮಜಾಯಿಷಿ ನೀಡಿ, ಶಾಲೆಯ ಫೀಸು ಕಟ್ಟಲು ಮೊಬೈಲ್ ಗಳಲ್ಲಿ ಟೆಕ್ಸ್ಟ್ ಮೆಸೇಜ್ ಗಳ ಯುದ್ಧವನ್ನು ಆರಂಭಿಸಿದ್ದಾರೆ. ಒಬ್ಬ ಸಾಮಾನ್ಯ ಕುಟುಂಬದ ಪರಿಸ್ಥಿತಿ ಈ ಕೊರೊನ ಕಾಲದಲ್ಲಿ ಅರಿತವರಿಗೆ ‌ಗೊತ್ತು.ವ್ಯಾಪಾರ,‌ ವ್ಯವಹಾರ ಇಲ್ಲ. ಮನೆಯಲ್ಲಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಲ್ಲಿರುವ ಈ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ಕಳುಹಿಸುವ ಶಿಕ್ಷಣ ಸಂಸ್ಥೆಗಳ ಫೀಸು, ಡೊನೇಷನ್ ಕಟ್ಟಲು ಸಾದ್ಯವೇ?. ಹಲವಾರು ‌ಶಿಕ್ಷಣ ಸಂಸ್ಥೆಗಳು ಹೆಚ್ಚಿನ ವರಮಾನ ತರುವ ಸಂಸ್ಥೆ ಗಳನ್ನು ಹೊಂದಿರುವ ಮ್ಯಾನೇಜ್ ಮೆಂಟ್ ಗೆ ಪ್ರಸ್ತುತ ಸಂದರ್ಭದಲ್ಲಿ ತಮ್ಮ ಒಂದು ವರ್ಷದ ಫೀಸ್ ನ್ನು ಮನ್ನಾ ಮಾಡುವ ಸಹ್ರೃದಯ ಇಲ್ಲದೇ ಹೋದದ್ದು ವಿಪರ್ಯಾಸವೇ ಸರಿ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಬೇಕು, ಈ ಸಮಸ್ಯೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು