5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೊಕ್ಕಸವನ್ನು‌ ತುಂಬಿಸುವುದನ್ನು ಬಿಟ್ಟು, ಬಡ ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ: ಸವಾದ್ ಸುಳ್ಯ

30/05/2021, 21:39

ಮಂಗಳೂರು(reporterkarnatakanews): ದೇಶದಾದ್ಯಂತ ಕೊರೊನ ಅಟ್ಟಹಾಸ ಮಾನವ ಸಂಕುಲವನ್ನು ತಲ್ಲಣಗೊಳಿಸಿದ್ದರೆ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿದೆ.ಕಳೆದ ಒಂದು ವರ್ಷವಿಡೀ ಕೇವಲ ಆನ್ ಲೈನ್ ಕ್ಲಾಸ್ ನಡೆಸುವ ಮೂಲಕ ಬಡ ಪೋಷಕರ ಹಣವನ್ನು ಸುಲಿಗೆ ಮಾಡಿ ಅವರ ಜೋಳಿಗೆಯನ್ನು ತುಂಬಿಸಿಕೊಂಡರು.ಫೀಸ್ ಕಟ್ಟದವರನ್ನು ಆನ್ ಲೈನ್ ಕ್ಲಾಸ್ ಗಳಿಗೆ ಕೂಡ ತೆಗೆಯುತ್ತಿಲ್ಲ, ಆದರೆ ಈ ಬಡ ಪೋಷಕರು ಈ ಹಣವನ್ನು ಎಲ್ಲಿಂದ ಭರಿಸುವರೆಂದು ತಿಳಿದುಕೊಳ್ಳುವ ಒಂದು ಸಣ್ಣ ಮನಸ್ಸನ್ನು ಕೂಡ ಇವರು ತೋರಲಿಲ್ಲ. ಇದೀಗ ಕೋವಿಡ್ ಎರಡನೆಯ ಅಲೆ ಲಕ್ಷಾಂತರ ಮನುಷ್ಯ ಜೀವದ ಪ್ರಾಣವನ್ನೇ ತೆಗೆದಿದ್ದರೆ, ಈ ಖಾಸಗಿ ಶಾಲೆಗಳು ಮತ್ತೊಮ್ಮೆ ತಮ್ಮ ಬೊಕ್ಕಸ ತುಂಬಿಸುವ ಪ್ರವೃತಿಯನ್ನು ಪ್ರಾರಂಭಿಸಿದೆ. ಮಕ್ಕಳು ಕಳೆದ ಒಂದು ವರ್ಷದಿಂದ ಮನೆಯಲ್ಲಿಯೇ ಇದ್ದರೂ, ಮತ್ತೊಮ್ಮೆ ಆನ್ ಲೈನ್ ಕ್ಲಾಸ್ ಎಂಬ ಸಮಜಾಯಿಷಿ ನೀಡಿ, ಶಾಲೆಯ ಫೀಸು ಕಟ್ಟಲು ಮೊಬೈಲ್ ಗಳಲ್ಲಿ ಟೆಕ್ಸ್ಟ್ ಮೆಸೇಜ್ ಗಳ ಯುದ್ಧವನ್ನು ಆರಂಭಿಸಿದ್ದಾರೆ. ಒಬ್ಬ ಸಾಮಾನ್ಯ ಕುಟುಂಬದ ಪರಿಸ್ಥಿತಿ ಈ ಕೊರೊನ ಕಾಲದಲ್ಲಿ ಅರಿತವರಿಗೆ ‌ಗೊತ್ತು.ವ್ಯಾಪಾರ,‌ ವ್ಯವಹಾರ ಇಲ್ಲ. ಮನೆಯಲ್ಲಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಲ್ಲಿರುವ ಈ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ಕಳುಹಿಸುವ ಶಿಕ್ಷಣ ಸಂಸ್ಥೆಗಳ ಫೀಸು, ಡೊನೇಷನ್ ಕಟ್ಟಲು ಸಾದ್ಯವೇ?. ಹಲವಾರು ‌ಶಿಕ್ಷಣ ಸಂಸ್ಥೆಗಳು ಹೆಚ್ಚಿನ ವರಮಾನ ತರುವ ಸಂಸ್ಥೆ ಗಳನ್ನು ಹೊಂದಿರುವ ಮ್ಯಾನೇಜ್ ಮೆಂಟ್ ಗೆ ಪ್ರಸ್ತುತ ಸಂದರ್ಭದಲ್ಲಿ ತಮ್ಮ ಒಂದು ವರ್ಷದ ಫೀಸ್ ನ್ನು ಮನ್ನಾ ಮಾಡುವ ಸಹ್ರೃದಯ ಇಲ್ಲದೇ ಹೋದದ್ದು ವಿಪರ್ಯಾಸವೇ ಸರಿ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಬೇಕು, ಈ ಸಮಸ್ಯೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು