9:54 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಕಾಸರಗೋಡು | ನಿಶ್ಚಿತಾರ್ಥವಾಗಿದ್ದ ಹುಡ್ಗ- ಹುಡ್ಗಿ ಆತ್ಮಹತ್ಯೆ: ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡು ಸೂಸೈಡ್

14/08/2026, 21:52

ಕಾಸರಗೋಡು(reporterkarnataka.com):ನಿಶ್ಚಿತಾರ್ಥವಾಗಿದ್ದ SBI ಬ್ಯಾಂಕ್ ಉದ್ಯೋಗಿಗಳಾದ ಕಾಸರಗೋಡು ಮತ್ತು ಕಣ್ಣೂರು ಮೂಲದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಆಘಾತ ಮೂಡಿದೆ.
ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪೂಚಕ್ಕಾಡ್ ನಿವಾಸಿ ಪಿ.ಅನುಶ್ರೀ (25) ಅವರು ಮೈಸೂರು ಜಿಲ್ಲೆಯ ಹುಣಸೂರಿನ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಅವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು.
ಇದಾದ ಕೆಲವೇ ಗಂಟೆಗಳ ಬಳಿಕ, ಅನುಶ್ರೀ ಅವರೊಂದಿಗೆ ನಿಶ್ಚಿತಾರ್ಥವಾಗಿದ್ದ ಕಣ್ಣೂರು ಮೂಲದ ವಿ.ಅಮಲ್ (26) ಅವರು ಎರ್ನಾಕುಲಂ ನಾರ್ತ್ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಮೃತಪಟ್ಟಿದ್ದಾರೆ. ಅಮಲ್ ಅವರು ಎರ್ನಾಕುಲಂನ ಎಂ.ಜಿ. ರೋಡ್ ಎಸ್ಬಿಐ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು.
ಡಿಸೆಂಬರ್ 26ಕ್ಕೆ ಮದುವೆ ನಿಗದಿ ಅನುಶ್ರೀ ಮತ್ತು ಅಮಲ್ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ನಡೆದಿತ್ತು.ಡಿಸೆಂಬರ್ 26ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಕಳೆದ ಶನಿವಾರ ಇಬ್ಬರೂ ಕಾಸರಗೋಡಿನ ಮನೆಗೆ ಬಂದಿದ್ದು, ಭಾನುವಾರ ಸಂಜೆ ತಮ್ಮ ಕೆಲಸದ ಸ್ಥಳಗಳಿಗೆ ಮರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಇಬ್ಬರೂ ವಿಡಿಯೋ ಕರೆ ಮೂಲಕ ಮಾತನಾಡಿದ್ದರು. ಬಳಿಕ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ವಿಡಿಯೋ ಕರೆಯಲ್ಲಿ ಏನು ಮಾತುಕತೆ ನಡೆದಿದೆ ಅಥವಾ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಬ್ಬರೂ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು