9:13 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಾಸರಗೋಡು ಬಳಿ ಖಾಸಗಿ ಬಸ್ ಪಲ್ಟಿ: ಚಾಲಕ ಸಾವು, 20 ಮಂದಿಗೆ ಗಾಯ; ಜಿಲ್ಲಾಸ್ಪತ್ರೆಗೆ ದಾಖಲು

18/03/2024, 22:24

ಕಾಸರಗೋಡು(reporterkarnataka.com): ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿದ್ದಾರೆ.
ಕಾಸರಗೋಡಿನ ಪೆರಿಯ ರಸ್ತೆಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮಧೂರು ರಾಮನಗರದ ನಿವಾಸಿ ಚೇತನ್ ಕುಮಾರ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಾಸರಗೋಡಿನ‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಿಂದ ಸ್ವಲ್ಪ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ನಂತರ ಅಗ್ನಿಶಾಮಕ ದಳದ ಕ್ರೇನ್ ಬಳಸಿ ಬಸ್ಸನ್ನು ರಸ್ತೆ ಬದಿಗೆ ಸರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು