10:00 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕಾಸರಗೋಡು: ತಲೆಯನ್ನು ಗೋಡೆಗೆ ಬಡಿದು ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ; ಆರೋಪಿ ಬಂಧನ

15/10/2023, 13:01

ಕಾಸರಗೋಡು(reporterkarnataka.com): ಹೆತ್ತಬ್ಬೆಯನ್ನೇ ಪುತ್ರ ಕೊಂದ ಅಮಾನುಷ ಘಟನೆ ಜಿಲ್ಲೆಯ ಕಣಿಚಿರ ಎಂಬ ಪ್ರದೇಶದಲ್ಲಿ ನಡೆದಿದೆ.
ಅತಿಯಾದ ಮೊಬೈಲ್ ಬಳಕೆಯನ್ನು ಪ್ರಶ್ನಿಸಿದ್ದೇ ಹೆತ್ತ ತಾಯಿಯ ಪ್ರಾಣಕ್ಕೆ ಕುತ್ತು ತಂದಿದೆ.
ಮೃತಪಟ್ಟ ಮಹಿಳೆಯನ್ನು ಕಣಿಚಿರದ ರುಕ್ಮಣಿ (63) ಎಂದು ಗುರುತಿಸಲಾಗಿದೆ.
ರುಕ್ಮಣಿ ಅವರ ತಲೆಯನ್ನು ಗೋಡೆಗೆ ಬಡಿದು ಪುತ್ರ ಸುಜಿತ್ ಗಾಯಗೊಳಿಸಿದ್ದ. ಪ್ರಕರಣ ನಡೆದ ಕೂಡಲೇ ಆತನ ಬಂಧನವೂ ಆಗಿತ್ತು. ಮಗನಿಂದ ಹಲ್ಲೆಗೆ ಒಳಗಾಗಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅತಿಯಾಗಿ ಮೊಬೈಲ್ ಬಳಕೆ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿಯ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು