11:39 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ

30/05/2024, 12:07

ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಕೇರಳದ ಹೊಸದುರ್ಗಾ ತಾಲೂಕಿನ ಪುಲ್ಲೂರು ಗ್ರಾಮದ ನಿವಾಸಿಯಾದ ಸುಜಿತ್ ಎಂದು ಗುರುತಿಸಲಾಗಿದೆ.
ಪಿಸ್ತೂಲ ಖಾಯಿಲೆಯಿಂದ ಬಳಲುತ್ತಿದ್ದ ಕಾಸರಗೋಡು ಮೂಲದ ಮಹಿಳೆಯೊಬ್ಬರು ಚಿಕಿತ್ಸೆಯನ್ನು ಪಡೆಯಲು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಜಿತ್ ಎಂಬವರ ಜತೆ ಮಾರ್ಚ್ 13ರಂದು ಬಂದಿದ್ದರು. ಚಿಕಿತ್ಸೆಯ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿರುವಾಗ ಮಾರ್ಚ್ 16ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಸುಜಿತ್ ಬಲವಂತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಒಪ್ಪಿಗೆಯಿಲ್ಲದೇ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಅವರ ನಗ್ನ ಫೋಟೋಗಳನ್ನು ತನ್ನ ಪೋನ್ ನಲ್ಲಿ ತೆಗೆದುಕೊಂಡಿದ್ದಾನೆ. ನಂತರ ಏಪ್ರಿಲ್ 4ರಂದು ಸುಜಿತ್ ಮಹಿಳೆಗೆ ಅವರ ನಗ್ನ ಪೋಟೋಗಳನ್ನು ತೋರಿಸಿ ಮಂಗಳೂರಿಗೆ ಬರುವಂತೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ಏಪ್ರಿಲ್ 4ರಿಂದ 8ರವರೆಗೆ ಮಂಗಳೂರು ಖಾಸಗಿ ಹೊಟೇಲೊಂದರಲ್ಲಿ ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿ, ನಗ್ನ ಪೋಟೋಗಳನ್ನು ತೆಗೆದುಕೊಂಡಿದ್ದಾನೆ. ಮಹಿಳೆಗೆ ವುಡ್ ಪಾಯಿಜನ್ ಆಗಿದ್ದರಿಂದ ಏಪ್ರಿಲ್ 8ರಿಂದ ಮೇ 10ರವರಿಗೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಮಯ ಅಲ್ಲಿ ಕೂಡಾ ಸುಜಿತ್ ಬಲವಂತವಾಗಿ ಮಹಿಳೆಗೆ ಅತ್ಯಾಚಾರ ಮಾಡಿದ್ದಾನೆ.
ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಯಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು