5:13 PM Sunday8 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ…

ಇತ್ತೀಚಿನ ಸುದ್ದಿ

ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ

30/05/2024, 12:07

ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಕೇರಳದ ಹೊಸದುರ್ಗಾ ತಾಲೂಕಿನ ಪುಲ್ಲೂರು ಗ್ರಾಮದ ನಿವಾಸಿಯಾದ ಸುಜಿತ್ ಎಂದು ಗುರುತಿಸಲಾಗಿದೆ.
ಪಿಸ್ತೂಲ ಖಾಯಿಲೆಯಿಂದ ಬಳಲುತ್ತಿದ್ದ ಕಾಸರಗೋಡು ಮೂಲದ ಮಹಿಳೆಯೊಬ್ಬರು ಚಿಕಿತ್ಸೆಯನ್ನು ಪಡೆಯಲು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಜಿತ್ ಎಂಬವರ ಜತೆ ಮಾರ್ಚ್ 13ರಂದು ಬಂದಿದ್ದರು. ಚಿಕಿತ್ಸೆಯ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿರುವಾಗ ಮಾರ್ಚ್ 16ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಸುಜಿತ್ ಬಲವಂತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಒಪ್ಪಿಗೆಯಿಲ್ಲದೇ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಅವರ ನಗ್ನ ಫೋಟೋಗಳನ್ನು ತನ್ನ ಪೋನ್ ನಲ್ಲಿ ತೆಗೆದುಕೊಂಡಿದ್ದಾನೆ. ನಂತರ ಏಪ್ರಿಲ್ 4ರಂದು ಸುಜಿತ್ ಮಹಿಳೆಗೆ ಅವರ ನಗ್ನ ಪೋಟೋಗಳನ್ನು ತೋರಿಸಿ ಮಂಗಳೂರಿಗೆ ಬರುವಂತೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ಏಪ್ರಿಲ್ 4ರಿಂದ 8ರವರೆಗೆ ಮಂಗಳೂರು ಖಾಸಗಿ ಹೊಟೇಲೊಂದರಲ್ಲಿ ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿ, ನಗ್ನ ಪೋಟೋಗಳನ್ನು ತೆಗೆದುಕೊಂಡಿದ್ದಾನೆ. ಮಹಿಳೆಗೆ ವುಡ್ ಪಾಯಿಜನ್ ಆಗಿದ್ದರಿಂದ ಏಪ್ರಿಲ್ 8ರಿಂದ ಮೇ 10ರವರಿಗೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಮಯ ಅಲ್ಲಿ ಕೂಡಾ ಸುಜಿತ್ ಬಲವಂತವಾಗಿ ಮಹಿಳೆಗೆ ಅತ್ಯಾಚಾರ ಮಾಡಿದ್ದಾನೆ.
ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಯಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು