9:57 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ

30/05/2024, 12:07

ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧಿಸಿದಂತೆ ಬಂಧಿತ ಆರೋಪಿಯನ್ನು ಕೇರಳದ ಹೊಸದುರ್ಗಾ ತಾಲೂಕಿನ ಪುಲ್ಲೂರು ಗ್ರಾಮದ ನಿವಾಸಿಯಾದ ಸುಜಿತ್ ಎಂದು ಗುರುತಿಸಲಾಗಿದೆ.
ಪಿಸ್ತೂಲ ಖಾಯಿಲೆಯಿಂದ ಬಳಲುತ್ತಿದ್ದ ಕಾಸರಗೋಡು ಮೂಲದ ಮಹಿಳೆಯೊಬ್ಬರು ಚಿಕಿತ್ಸೆಯನ್ನು ಪಡೆಯಲು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಜಿತ್ ಎಂಬವರ ಜತೆ ಮಾರ್ಚ್ 13ರಂದು ಬಂದಿದ್ದರು. ಚಿಕಿತ್ಸೆಯ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿರುವಾಗ ಮಾರ್ಚ್ 16ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಸುಜಿತ್ ಬಲವಂತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಒಪ್ಪಿಗೆಯಿಲ್ಲದೇ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಅವರ ನಗ್ನ ಫೋಟೋಗಳನ್ನು ತನ್ನ ಪೋನ್ ನಲ್ಲಿ ತೆಗೆದುಕೊಂಡಿದ್ದಾನೆ. ನಂತರ ಏಪ್ರಿಲ್ 4ರಂದು ಸುಜಿತ್ ಮಹಿಳೆಗೆ ಅವರ ನಗ್ನ ಪೋಟೋಗಳನ್ನು ತೋರಿಸಿ ಮಂಗಳೂರಿಗೆ ಬರುವಂತೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದು ಏಪ್ರಿಲ್ 4ರಿಂದ 8ರವರೆಗೆ ಮಂಗಳೂರು ಖಾಸಗಿ ಹೊಟೇಲೊಂದರಲ್ಲಿ ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿ, ನಗ್ನ ಪೋಟೋಗಳನ್ನು ತೆಗೆದುಕೊಂಡಿದ್ದಾನೆ. ಮಹಿಳೆಗೆ ವುಡ್ ಪಾಯಿಜನ್ ಆಗಿದ್ದರಿಂದ ಏಪ್ರಿಲ್ 8ರಿಂದ ಮೇ 10ರವರಿಗೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಮಯ ಅಲ್ಲಿ ಕೂಡಾ ಸುಜಿತ್ ಬಲವಂತವಾಗಿ ಮಹಿಳೆಗೆ ಅತ್ಯಾಚಾರ ಮಾಡಿದ್ದಾನೆ.
ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಯಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು