1:04 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ

11/01/2022, 10:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka.com

ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ.

ಮಸ್ಕಿಯ ಯುವಕ ಮನೋಜ್ ಕುಮಾರ್ ಕಳೆದ 10 ವರ್ಷಗಳಿಂದ ದೇಶ ಕಾಯುವ ಕಾಯಕದಲ್ಲಿ ನಿರತರಾಗಿದ್ದಾರೆ. ಕಾಶ್ಮೀರದ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಕಾಶ್ಮೀರದ ಹಿಮ ಪರ್ವತದಲ್ಲಿ ತನ್ನ ಹುಟ್ಟೂರಿನ ಅಭಿಮಾನದಿಂದ ಹಿಮಗುಡ್ಡೆಯ ಮೇಲೆ ಮಸ್ಕಿ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ಮನೋಜ್ ಕುಮಾರ್ ಮಸ್ಕಿಯ ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದರು. ಶಾಲಾ ದಿನಗಳಲ್ಲಿ ದೇಶ ಅಭಿಮಾನ ಹೊಂದಿದ್ದು, ದೇಶಸೇವೆ ಮಾಡುವ ಅಭಿಲಾಷೆಯನ್ನು ತನ್ನ ಸ್ನೇಹಿತರ ಜತೆ ಹಂಚಿಕೊಂಡಿದ್ದರು. ಇದನ್ನು ಮಸ್ಕಿಯಲ್ಲಿರುವ ಅವ ಸ್ನೇಹಿತರು ನೆನಪಿಸಿಕೊಳ್ಳುತ್ತಾರೆ.

ಮಸ್ಕಿ ಯೋಧ ಮನೋಜ್ ಕುಮಾರ್ ದೇಶಸೇವೆ ಮಾಡಲು ಸೇರಿದಾಗಿನಿಂದ ಆತನಿಗೆ ಹುಟ್ಟೂರಿನ ಅಭಿಮಾನಿಗಳು ಹೆಚ್ಚಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು