7:53 PM Saturday7 - February 2026
ಬ್ರೇಕಿಂಗ್ ನ್ಯೂಸ್
NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ

21/03/2022, 17:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು ವಿರುದ್ಧ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಟಿ.ರವಿ ವ್ಯಂಗ್ಯವಾಡಿದರು ಕಾಶ್ಮೀರಿ ಫೈಲ್ಸ್ ವಾಸ್ತವಿಕ ಸತ್ಯದ ಘಟನೆಗಳ ಚಿತ್ರ. 

ಸಿದ್ದರಾಮಯ್ಯ ಅವರು ವಕೀಲರಿದ್ದಾರೆ, ಬುದ್ಧಿವಂತರಿದ್ದಾರೆ ಆಯಾ ಕಾಲಘಟ್ಟದ ಸರ್ಕಾರಿ ದಾಖಲೆಗಳಿವೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದರು.

ಬಾಮಿಯಾನ್‍ನಲ್ಲಿ ಬುದ್ದ ನಗುತ್ತಾ ನಿಂತಿದ್ದ, ಅವನನ್ನ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಬುದ್ಧನಿಗಿಂತ ಶಾಂತಿ ಸಂದೇಶ ಸಾರಿದ ಮತ್ತೋಬ್ಬ ವ್ಯಕ್ತಿ ಬೇಕಾ? ಅದೇ ಜನ ಕಾಶ್ಮೀರಿ ಪಂಡಿತರು, ಹಿಂದೂಗಳ ಕಾಶ್ಮೀರ ಕಣಿವೆ ತೊರೆಯಬೇಕೆಂದು ಮೈಕ್‍ನಲ್ಲಿ ಕೂಗಿದರು.

ಅದೇ ಜನರು ಭಯ ಹುಟ್ಟಿಸಲು ಕೊಂದರು, ಗರಗಸದಲ್ಲಿ ಕೊಯ್ದರು. ಸಾಕ್ಷಿ ಬೇಕು ಅಂದ್ರೆ ಸಾವಿರ ಸಾಕ್ಷಿಗಳು ಸಿಗುತ್ತವೆ ಎಂದು ಅವರು ನುಡಿದರು.

ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ, ನಿರಾಶ್ರಿತರಾಗಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಅರ್ಥವಾಗಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಸತ್ಯದ ವಿವೇಚನೆಗೆ ಒಳಗಾಗೋರು 

ಅವರಿಗೆ ಸತ್ಯವನ್ನೋ ನೋಡಿ ಒಪ್ಪಿಕೊಳ್ಳುವ ಮನಸ್ಸು-ಮನಸ್ಥಿತಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು