3:51 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ

21/03/2022, 17:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು ವಿರುದ್ಧ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಟಿ.ರವಿ ವ್ಯಂಗ್ಯವಾಡಿದರು ಕಾಶ್ಮೀರಿ ಫೈಲ್ಸ್ ವಾಸ್ತವಿಕ ಸತ್ಯದ ಘಟನೆಗಳ ಚಿತ್ರ. 

ಸಿದ್ದರಾಮಯ್ಯ ಅವರು ವಕೀಲರಿದ್ದಾರೆ, ಬುದ್ಧಿವಂತರಿದ್ದಾರೆ ಆಯಾ ಕಾಲಘಟ್ಟದ ಸರ್ಕಾರಿ ದಾಖಲೆಗಳಿವೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದರು.

ಬಾಮಿಯಾನ್‍ನಲ್ಲಿ ಬುದ್ದ ನಗುತ್ತಾ ನಿಂತಿದ್ದ, ಅವನನ್ನ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಬುದ್ಧನಿಗಿಂತ ಶಾಂತಿ ಸಂದೇಶ ಸಾರಿದ ಮತ್ತೋಬ್ಬ ವ್ಯಕ್ತಿ ಬೇಕಾ? ಅದೇ ಜನ ಕಾಶ್ಮೀರಿ ಪಂಡಿತರು, ಹಿಂದೂಗಳ ಕಾಶ್ಮೀರ ಕಣಿವೆ ತೊರೆಯಬೇಕೆಂದು ಮೈಕ್‍ನಲ್ಲಿ ಕೂಗಿದರು.

ಅದೇ ಜನರು ಭಯ ಹುಟ್ಟಿಸಲು ಕೊಂದರು, ಗರಗಸದಲ್ಲಿ ಕೊಯ್ದರು. ಸಾಕ್ಷಿ ಬೇಕು ಅಂದ್ರೆ ಸಾವಿರ ಸಾಕ್ಷಿಗಳು ಸಿಗುತ್ತವೆ ಎಂದು ಅವರು ನುಡಿದರು.

ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ, ನಿರಾಶ್ರಿತರಾಗಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಅರ್ಥವಾಗಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಸತ್ಯದ ವಿವೇಚನೆಗೆ ಒಳಗಾಗೋರು 

ಅವರಿಗೆ ಸತ್ಯವನ್ನೋ ನೋಡಿ ಒಪ್ಪಿಕೊಳ್ಳುವ ಮನಸ್ಸು-ಮನಸ್ಥಿತಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು