7:04 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ

21/03/2022, 17:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು ವಿರುದ್ಧ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಟಿ.ರವಿ ವ್ಯಂಗ್ಯವಾಡಿದರು ಕಾಶ್ಮೀರಿ ಫೈಲ್ಸ್ ವಾಸ್ತವಿಕ ಸತ್ಯದ ಘಟನೆಗಳ ಚಿತ್ರ. 

ಸಿದ್ದರಾಮಯ್ಯ ಅವರು ವಕೀಲರಿದ್ದಾರೆ, ಬುದ್ಧಿವಂತರಿದ್ದಾರೆ ಆಯಾ ಕಾಲಘಟ್ಟದ ಸರ್ಕಾರಿ ದಾಖಲೆಗಳಿವೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದರು.

ಬಾಮಿಯಾನ್‍ನಲ್ಲಿ ಬುದ್ದ ನಗುತ್ತಾ ನಿಂತಿದ್ದ, ಅವನನ್ನ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಬುದ್ಧನಿಗಿಂತ ಶಾಂತಿ ಸಂದೇಶ ಸಾರಿದ ಮತ್ತೋಬ್ಬ ವ್ಯಕ್ತಿ ಬೇಕಾ? ಅದೇ ಜನ ಕಾಶ್ಮೀರಿ ಪಂಡಿತರು, ಹಿಂದೂಗಳ ಕಾಶ್ಮೀರ ಕಣಿವೆ ತೊರೆಯಬೇಕೆಂದು ಮೈಕ್‍ನಲ್ಲಿ ಕೂಗಿದರು.

ಅದೇ ಜನರು ಭಯ ಹುಟ್ಟಿಸಲು ಕೊಂದರು, ಗರಗಸದಲ್ಲಿ ಕೊಯ್ದರು. ಸಾಕ್ಷಿ ಬೇಕು ಅಂದ್ರೆ ಸಾವಿರ ಸಾಕ್ಷಿಗಳು ಸಿಗುತ್ತವೆ ಎಂದು ಅವರು ನುಡಿದರು.

ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ, ನಿರಾಶ್ರಿತರಾಗಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಅರ್ಥವಾಗಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಸತ್ಯದ ವಿವೇಚನೆಗೆ ಒಳಗಾಗೋರು 

ಅವರಿಗೆ ಸತ್ಯವನ್ನೋ ನೋಡಿ ಒಪ್ಪಿಕೊಳ್ಳುವ ಮನಸ್ಸು-ಮನಸ್ಥಿತಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು