8:01 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಾಶ್ಮೀರ ಪಹಲ್ಗಾಮ್‌ ದುಷ್ಕೃತ್ಯ ಮಾನವತೆಗೆ ಕಳಂಕ: ಮಂಗಳೂರು ಬಿಷಪ್‌ ಡಾ.ಪೀಟರ್‌ ಪಾವ್ಲ್‌ ಸಲ್ಡಾನಾ ಖೇದ

24/04/2025, 14:29

ಮಂಗಳೂರು(reporterkarnataka.com): ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ. ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.
ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.
ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು