10:01 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಕಸ್ತೂರಿ ರಂಗನ್ ವರದಿ‌: ದಕ್ಷಿಣ ಕನ್ನಡ ಜಿಲ್ಲೆಯ 40ಕ್ಕೂ ಹೆಚ್ಚು ಗ್ರಾಮಗಳು ಡೇಂಜರ್ ಝೋನ್ ನಲ್ಲಿ!

21/07/2022, 10:57

ಮಂಗಳೂರು(reporterkarnataka.com): ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ 5ನೇ ಅಧಿಸೂಚನೆಯನ್ನು ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 43 ಗ್ರಾಮಗಳು ಡೇಂಜರ್ ಝೋನ್ ನಲ್ಲಿದೆ.

ಪರಿಸರ ಇಲಾಖೆಯ ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. 

ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ ಜೀವನವೇ ಅಸ್ತವ್ಯಸ್ತವಾಗುವ ಆತಂಕ ಎದುರಾಗಿದೆ.

ಕೇಂದ್ರ ಸರ್ಕಾರಕ್ಕೆ ಗಾಡ್ಗಿಳ್ ವರದಿಯು 2010ರಲ್ಲಿ ಸಲ್ಲಿಕೆಯಾಗಿತ್ತು. ಗಾಡ್ಗಿಳ್ ವರದಿ ಅವೈಜ್ಞಾನಿಕವಾಗಿದೆ ಎಂದು ಇಸ್ರೋ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದ ಸಮಿತಿಯನ್ನು ರಚನೆಯನ್ನು ಮಾಡಲಾಗಿತ್ತು. ಕಸ್ತೂರಿ ರಂಗನ್ ಸಮಿತಿಯ ಅಧ್ಯಯನವನ್ನು ಮಾಡಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲು ವರದಿಯನ್ನು ನೀಡಿತ್ತು. ಅದರಂತೆ ಗುಜರಾತ್ ತಮಿಳುನಾಡಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ ವ್ಯಾಪ್ತಿಯನ್ನು ಹೇಳಿತ್ತು. ಅದರಂತೆ ಕರ್ನಾಟಕದ 20668 ಚದರ ಕಿ.ಮೀ ಪ್ರದೇಶ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಒಳಪಡುತ್ತದೆ. ಅಂದರೆ ಕರುನಾಡಿನ ಸಾವಿರಾರು ಹಳ್ಳಿಯ ಜನರ ಬದುಕು ಬೀದಿಗೆ ಬೀಳಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ, ಮಲವಂತಿಗೆ, ಕುತ್ಲೂರು, ಸುಲ್ಕೇರಿಮೊಗ್ರು, ಶಿರ್ಲಾಲು, ನಾವರಾ, ಸವಣಾಲು, ಚಾರ್ಮಾಡಿ, ಸುಲ್ಕೇರಿ, ನಾವೂರು, ನೆರಿಯ, ನಾಡ, ಪುದುವೆಟ್ಟು, ಶಿಶಿಲ, ಕಳೆಂಜಾ, ಶಿಬಾಜೆ, ರೆಖ್ಯಾ ಗ್ರಾಮಗಳು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರಲಿದೆ.

ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗೋಳಿತೊಟ್ಟು, ಶಿರಾಡಿ, ಅಲಂತಾಯ, ಸಿರಿಬಾಗಿಲು, ಬಲ್ಯಾ, ಕೊಂಬಾರು, ಬಿಳಿನೆಲೆ, ದೊಳ್ಪಾಡಿ, ಬಳ್ಪ, ಏನೆಕಲ್ಲು, ಸುಬ್ರಮಣ್ಯ, ಐನೆಕಿದು ಗ್ರಾಮಗಳು ಕಸ್ತೂರಿ ರಂಗನ್ ವರದಿಯಲ್ಲಿವೆ.

ಸುಳ್ಯ ತಾಲೂಕಿನ ನಾಲ್ಕೂರು, ಕೂತ್ಕುಂಜ, ದೇವಚಳ್ಳ, ಹರಿಹರಪಲ್ಲತಡ್ಕ, ಬಾಳುಗೋಡು, ಮಡಪ್ಪಾಡಿ, ಉಬರಡ್ಕ ಮಿತ್ತೂರು, ಕಲ್ಮಕಾರು, ಅರಂತೋಡು, ಅಲೆಟ್ಟಿ, ಸಂಪಾಜೆ, ತೊಡಿಕಾನ ಗ್ರಾಮಗಳನ್ನು ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ.

ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಗೊಳಿಸಿದರೆ ಈ ಹಳ್ಳಿಗರ ಅಭಿವೃದ್ಧಿಗೆ ಹಿನ್ನಡೆ ಆಗುವ ಅಪಾಯವಿದೆ. ವರದಿಯಲ್ಲಿ ಹೇಳಿರುವಂತೆ ಕನಿಷ್ಠ ಮೂಲಭೂತ ಸೌಕರ್ಯಗಳಿಂದಲೂ ವಂಚಿತವಾಗುವ ಅಪಾಯವಿದ್ದು, ಇದೇ ಕಾರಣಕ್ಕೆ ಜನರು ಈ ವರದಿಯನ್ನು ವಿರೋಧಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು