9:01 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ

19/05/2024, 00:04

ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು.


ಮಂಗಳೂರಿನ 13 ವಲಯಗಳ ಕುಟುಂಬದ ಸದಸ್ಯರುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು.
ಸಮಾರೋಪ ಸಮಾರಂಭದಲ್ಲಿ ವೇದಮೂರ್ತಿ ವೆಂಕಟರಮಣ ಆಸ್ರಣ್ಣರು ಮಾತನಾಡಿ, ಕ್ರೀಡೆಯು ಸಮಗ್ರ ಶಿವಳ್ಳಿ ಬಾಂಧವರನ್ನು ಒಗ್ಗೂಡಿಸುವಲ್ಲಿ ಮಹತ್ತರ ಹೆಜ್ಜೆಯನ್ನು ಇರಿಸಿದೆ. ಕ್ರೀಡೆಯಿಂದಲೂ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬಹುದು ಎಂದರು.
ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಮೋಹನ್ ರಾವ್ ಪಾವಂಜೆ, ಮಹಿಳಾ ಘಟಕ ಅಧ್ಯಕ್ಷೆ ರಮಾಮಣಿ, ಎಲ್ಲೂರು ರಾಮಚಂದ್ರ ಭಟ್, ದೀಪಾ ಕೆ. ಭಟ್, ಸಂಹಿತಾ ಅಲೆವೂರಾಯ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಕಟೀಲು ವಲಯದ ಅಧ್ಯಕ್ಷ ಆನಂತ ಪದ್ಮನಾಭ ಆಚಾರ್ಯರು ವಂದಿಸಿದರು. ವಲಯ ಉಸ್ತುವಾರಿ ಪ್ರದೀಪ್ ಕುಮಾರ್ ರಾವ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು