7:31 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು