2:11 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು