1:10 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು