7:53 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು