4:16 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು