8:18 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು