8:48 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು