9:23 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು