11:27 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು