3:38 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಸಂಪರ್ಕಿಸುವ ದೇವರಗುಡ್ಡೆ ಸಮೀಪ ಗುಡ್ಡೆ ಕುಸಿತ: ಲಾಕ್ ಡೌನ್ ನಿಂದ ತಪ್ಪಿದ ಭಾರಿ ಅನಾಹುತ

18/06/2021, 19:24

ಕಿನ್ನಿಗೋಳಿ(reporterkarnataka news): ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಕಾರಣ ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ದೇವರಗುಡ್ಡೆ ಬಳಿ ಇಂದು ಗುಡ್ಡ ಕುಸಿದಿದ್ದು, ಬಂಡೆಗಲ್ಲು ರಸ್ತೆಗೆ ಬಿದ್ದಿದೆ. ಲಾಕ್ ಡೌನ್ ನಿಂದ ವಾಹನ ಮತ್ತು ಜನ ಸಂಚಾರ ವಿರಳವಾಗಿರುವುದರಿಂದ ಭಾರಿ ಅನಾಹುತ ತಪ್ಪಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಕಟೀಲು- ಬಜಪೆ ರಾಜ್ಯ ಹೆದ್ದಾರಿ ವಿಸ್ತರಿಸಲು ಹೆದ್ದಾರಿ ಬದಿಯ ಗುಡ್ಡಗಳನ್ನು ಕಡಿದು ರಸ್ತೆ ಅಗಲಗೊಳಿಸಲಾಗಿತ್ತು. ಈ ಗುಡ್ಡ ಮಳೆಗೆ ಕುಸಿದು ಬಿದ್ದಿದೆ.

ಕಳೆದ ಮಳೆಗಾಲದಲ್ಲಿ ಕೂಡ ದೇವರಗುಡ್ಡೆ ಬಳಿ ರಸ್ತೆ ಕುಸಿದಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.

 ಶುಕ್ರವಾರ ಮುಂಜಾನೆ ಸುರಿದ ಭಾರಿ ಮಳೆಗೆ ರಸ್ತೆ ಬದಿ ಗುಡ್ಡದ ಬೃಹದಾಕಾರದ ಬಂಡೆಕಲ್ಲು ಸಹಿತ ಮಣ್ಣು ಮುಖ್ಯರಸ್ತೆಗೆ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿತು. ಸದಾ ಕಾಲ ಬ್ಯುಸಿಯಾಗಿರುವ ಕಟೀಲು- ಬಜಪೆ ರಾಜ್ಯ ಹೆದ್ದಾರಿ ಈಗ ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಜನ- ವಾಹನ ಸಂಚಾರ ಅತಿ ವಿರಳವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು