6:06 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಸಂಪರ್ಕಿಸುವ ದೇವರಗುಡ್ಡೆ ಸಮೀಪ ಗುಡ್ಡೆ ಕುಸಿತ: ಲಾಕ್ ಡೌನ್ ನಿಂದ ತಪ್ಪಿದ ಭಾರಿ ಅನಾಹುತ

18/06/2021, 19:24

ಕಿನ್ನಿಗೋಳಿ(reporterkarnataka news): ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಕಾರಣ ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ದೇವರಗುಡ್ಡೆ ಬಳಿ ಇಂದು ಗುಡ್ಡ ಕುಸಿದಿದ್ದು, ಬಂಡೆಗಲ್ಲು ರಸ್ತೆಗೆ ಬಿದ್ದಿದೆ. ಲಾಕ್ ಡೌನ್ ನಿಂದ ವಾಹನ ಮತ್ತು ಜನ ಸಂಚಾರ ವಿರಳವಾಗಿರುವುದರಿಂದ ಭಾರಿ ಅನಾಹುತ ತಪ್ಪಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಕಟೀಲು- ಬಜಪೆ ರಾಜ್ಯ ಹೆದ್ದಾರಿ ವಿಸ್ತರಿಸಲು ಹೆದ್ದಾರಿ ಬದಿಯ ಗುಡ್ಡಗಳನ್ನು ಕಡಿದು ರಸ್ತೆ ಅಗಲಗೊಳಿಸಲಾಗಿತ್ತು. ಈ ಗುಡ್ಡ ಮಳೆಗೆ ಕುಸಿದು ಬಿದ್ದಿದೆ.

ಕಳೆದ ಮಳೆಗಾಲದಲ್ಲಿ ಕೂಡ ದೇವರಗುಡ್ಡೆ ಬಳಿ ರಸ್ತೆ ಕುಸಿದಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.

 ಶುಕ್ರವಾರ ಮುಂಜಾನೆ ಸುರಿದ ಭಾರಿ ಮಳೆಗೆ ರಸ್ತೆ ಬದಿ ಗುಡ್ಡದ ಬೃಹದಾಕಾರದ ಬಂಡೆಕಲ್ಲು ಸಹಿತ ಮಣ್ಣು ಮುಖ್ಯರಸ್ತೆಗೆ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿತು. ಸದಾ ಕಾಲ ಬ್ಯುಸಿಯಾಗಿರುವ ಕಟೀಲು- ಬಜಪೆ ರಾಜ್ಯ ಹೆದ್ದಾರಿ ಈಗ ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಜನ- ವಾಹನ ಸಂಚಾರ ಅತಿ ವಿರಳವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು