3:22 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕಟೀಲು ಮೇಳದ ಹಿರಿಯ ಹಾಸ್ಯಗಾರ ರವಿಶಂಕರ ವಳಕುಂಜರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

15/02/2025, 17:48

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಟೀಲು‌ ಮೇಳದ ತೆಂಕುತಿಟ್ಟಿನ ಹಿರಿಯ ಕಲಾವಿದ, ಹಾಸ್ಯಗಾರ ರವಿಶಂಕರ ವಳಕುಂಜ ಅವರನ್ನು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಸಮಿತಿ ವತಿಯಿಂದ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಶನಿವಾರ ಶಂಬೂರು ಗ್ರಾಮದ ಬೊಂಡಾಲದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯಕ್ಷಗಾನ ಬಯಲಾಟ ಸೇವೆಯ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷ ತೆಯಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗೌರವ ಅತಿಥಿಗಳಾಗಿ ಅನಂತ ಪದ್ಮನಾಭ ಅಸ್ರಣ್ಣ ಕಟೀಲು ಅವರು ಶುಭಹಾರೈಸಿ ಆಶೀರ್ವಚನ ನೀಡಿ ಮಾತನಾಡಿದರು. ಧಾರ್ಮಿಕ ಪರಿಷತ್ತು ರಾಜ್ಯ ಸದಸ್ಯ ಎ.ರವಿಶಂಕರ ಶೆಟ್ಟಿ ಬಡಾಜೆ ಗುತ್ತು, ಕೆ.ಕೆ. ಶೆಟ್ಟಿ ಕುಂಬ್ಳೆ (ರಾಜರಾಜೇಶ್ವರಿ ದೇವಸ್ಥಾನ) ಅವರು ಅಭಿನಂದನೆ ಸಲ್ಲಿಸಿದರು. ರವಿಶಂಕರ ವಳಕ್ಕುಂಜ ಸನ್ಮಾನ ಸ್ವೀಕರಿಸಿ ಮಾತನಾಡಿ ಬೊಂಡಾಲ ಮನೆತನದವರು ಯಕ್ಷಗಾನ ಹಾಗೂ ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.
ಗ್ರಾಮ‌ ಪಂಚಾಯತ್ ಅಧ್ಯಕ್ಷ ಸಂತೋಷ್ ‌ ಮತ್ತಿತರರು ಉಪಸ್ಥಿತರಿದ್ದರು.


ಬೊಂಡಾಲ ಸಂಸ್ಮರಣೆ ಮತ್ತು ಬಯಲಾಟ ಸಮಿತಿಯ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು. ಸೀತಾರಾಮ ಶೆಟ್ಟಿ ವಂದಿಸಿದರು.
ಬಳಿಕ ಕಟೀಲು ಮೇಳದ‌ ವತಿಯಿಂದ ಶ್ರೀ ದೇವಿ ಮಹಾತ್ಮೆ ಬಯಲಾಟ ಪ್ರದರ್ಶನವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು