7:01 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕಟೀಲು ಎಸ್ ಡಿಪಿಟಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕ್ಯಾಪ್ಸ್ ಸೈನ್ಸ್ ಪಾರ್ಕ್ ಉದ್ಘಾಟನೆ

21/11/2024, 19:02

ರಾಯಿ ರಾಜಕುಮಾರ ಮೂಡುಬಿದಿರೆ

info.reporterkarnataka@gmail.com

ಮಂಗಳೂರು ತಾಲೂಕಿನ ಕಟೀಲು ಎಸ್ ಡಿಪಿಟಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕ್ಯಾಪ್ಸ್ ಸಂಸ್ಥೆಯವರಿಂದ ಸೈನ್ಸ್ ಪಾರ್ಕ್ ಹಾಗೂ ಗುರು ಪೂಜನ ಕಾರ್ಯಕ್ರಮ ಕ್ಯಾಪ್ಸ್ ಫೌಂಡೇಶನ್ ಬೆಂಗಳೂರು ವತಿಯಿಂದ ನವೆಂಬರ್ 20ರಂದು ನಡೆಯಿತು. ಪದವಿಪೂರ್ವ ಕಾಲೇಜಿನ ಬದಿಯಲ್ಲಿ ಕ್ಯಾಪ್ಸ್ ಸೈನ್ಸ್ ಪಾರ್ಕ್ ಅನ್ನು ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ದೀಪ ಬೆಳಗಿ ಉದ್ಘಾಟಿಸಿದರು.


ತರುವಾಯ ನಡೆದ ಸಭಾ ಕಾರ್ಯಕ್ರಮದಲ್ಲಿ ಕಟಿಲಿನ ವೇ. ಮೂ. ವಾಸುದೇವ ಅಸ್ರಣ್ಣ ಮಾತನಾಡಿ, ಕಾಲೇಜಿನಲ್ಲಿಯೇ ಕಲಿತ ವ್ಯಕ್ತಿ ಈ ಮಹಾನ್ ಕಾರ್ಯವನ್ನು ಮಾಡಿರುವುದಕ್ಕೆ ಶುಭ ಹಾರೈಸಿದರು.
ಹಳೆ ವಿದ್ಯಾರ್ಥಿಯ ಸಾಧನೆ ಈಗಿನ ಮಕ್ಕಳಿಗೆ ಪ್ರೇರಕ ಎಂದು ವೇ ಮೂ ಅನಂತಪದ್ಮನಾಭ ಆಸ್ರಣ್ಣ ಶುಭ ಹಾರೈಸಿದರು. ವೇ.ಮೂ ಹರಿನಾರಾಯಣ ಅಸ್ರಣ್ಣ ಮಾತನಾಡಿ ವಾಮನ ಮೂರ್ತಿಯಂತಿದ್ದ ಚಂದ್ರಶೇಖರ ಶೆಟ್ಟಿ ತ್ರಿ ವಿಕ್ರಮನಂತೆ ಬೆಳೆದು ಕಾಲೇಜಿಗೆ ಉತ್ತಮ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ಕನ್ನಡಿಯಂತೆ ಸ್ವಚ್ಛ ಸಾಧಕನಾಗಿ ಮೆರೆಯುತ್ತಿರುವ ಇವರು ವಿಜ್ಞಾನದ ಅತ್ಯುತ್ತಮವಾದಂತಹ ಉಪಕರಣಗಳನ್ನು ಸೈನ್ಸ್ ಪಾರ್ಕ್ ನಲ್ಲಿ ಅಳವಡಿಸಿ ಕಾಲೇಜಿಗೆ ಮಾತ್ರವಲ್ಲ ಇಡೀ ಜಿಲ್ಲೆಯ ಶಾಲೆಯ ವಿದ್ಯಾರ್ಥಿಗಳಿಗೂ ಒದಗಿಸಿ ಕೊಟ್ಟಿರುವುದು ಪ್ರಶಂಸನೀಯ ಎಂದರು.
ಪ್ಲಾಸ್ಟಿಕ್ ಮುಕ್ತ ಭಾರತಕ್ಕಾಗಿ ಕ್ಯಾಪ್ಸ್ ಫೌಂಡೇಶನ್ ಬಹಳಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಎಲ್ಲರೂ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ತ್ಯಜಿಸಿ ಪರ್ಯಾಯ ವಸ್ತುಗಳನ್ನು ಉಪಯೋಗಿಸಬೇಕೆಂದು ಚಂದ್ರಶೇಖರ ಶೆಟ್ಟಿ ಕೇಳಿಕೊಂಡರು. ನವರಸಗಳನ್ನು ತೋರಿಸಿಕೊಡುವ ಯಕ್ಷಗಾನಕ್ಕೂ ಪ್ರಾಧಾನ್ಯತೆಯನ್ನು ಕೊಡಬೇಕೆಂದು ಆಶಿಸಿದರು. ಅವರಿಗೆ ಸಾಕಷ್ಟು ಉತ್ತೇಜನವನ್ನು ಕೊಟ್ಟ ಡಾ. ಕೃಷ್ಣ ಕಾಂಚನ್ ಹಾಗೂ ನಾಗೇಶ್ ರಾವ್ ಅವರನ್ನು ಅಭೂತಪೂರ್ವಾಗಿ ಗುರು ಪುರಸ್ಕಾರದೊಂದಿಗೆ ಸನ್ಮಾನಿಸಿದರು.
ಸಂಸ್ಕೃತ ಅಧ್ಯಾಪಕ ಶ್ರೀವತ್ಸ ಸ್ವಾಗತಿಸಿದರು. ಅಧ್ಯಾಪಕ ರಾಜಶೇಖರ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು