8:26 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕಟೀಲು: ತೋಟಗಾರಿಕೆ ಇಲಾಖೆಯಿಂದ ಕೃಷಿಕರಿಗೆ ಮಲ್ಲಿಗೆ  ಕೃಷಿ ಕಾರ್ಯಾಗಾರ; ಮಲ್ಲಿಗೆ ಸಸಿ ವಿತರಣೆ

04/07/2022, 00:04

ಬೆಂಗಳೂರು(reporterkarnataka.com): ಜಿಲ್ಲಾ ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಸಂಯುಕ್ತ ಸಹಯೋಗದಲ್ಲಿ ಕೃಷಿಕರಿಗೆ ಮಲ್ಲಿಗೆ ಕೃಷಿ ಕಾರ್ಯಾಗಾರ
ಮತ್ತು ಮಲ್ಲಿಗೆ ಸಸಿ ವಿತರಣೆ ಕಾರ್ಯಕ್ರಮ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯಿತು.


ಶಾಸಕ ಉಮಾನಾಥ ಕೋಟ್ಯಾನ್ ಅವರು ಮಲ್ಲಿಗೆ ಸಸಿ ನೀಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರು  ಆಗಮಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು, ಇಂದಿನ ದಿನಗಳಲ್ಲಿ ದೀರ್ಘಕಾಲಿಕ ಬೆಳೆಗಳನ್ನು ಒಂದೆಡೆ ಬೆಳೆಯುವುದಾದರೆ, ಆದಾಯ ತಂದು ಕೊಡುವ ಅಲ್ಪಕಾಲಿಕ ಬೆಳೆಗಳನ್ನು ಬೆಳೆಯುವುದು ಸಹ ಸೂಕ್ತ. ಈ ಹಿನ್ನೆಲೆಯಲ್ಲಿ ಮಲ್ಲಿಗೆ ಬೆಳೆ  ರೈತರಿಗೆ ಆರ್ಥಿಕವಾಗಿ ಸದೃಢ ಹೆಜ್ಜೆ ಇಡುವಲ್ಲಿ ಸಹಕಾರಿ ಎಂದರು.

ಸರಕಾರ ರೈತರಿಗೆ ಹಲವು ವಿಶೇಷ ಯೋಜನೆಗಳು ಹಮ್ಮಿಕೊಂಡಿದ್ದು, ರೈತರು ತೋಟಗಾರಿಕೆ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯಾದ್ಯಂತ ಮಲ್ಲಿಗೆ ಕೃಷಿ ಬೆಳೆಯುವ ರೈತರು ಲಾಭದಾಯಕ ಹೆಜ್ಜೆ ಇಡುತ್ತಿರುವುದು, ಮುನ್ನಡೆಯುವುದು ಉತ್ತಮ  ಬೆಳವಣಿಗೆ ಎಂದು ಅವರು ನುಡಿದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರದ ಅರ್ಚಕರು ಮಾತನಾಡಿ, ದುರ್ಗಾಪರಮೇಶ್ವರಿ ದೇವರಿಗೆ ಪ್ರಿಯವಾದ ಮಲ್ಲಿಗೆ ಕೃಷಿ ಬೆಳೆಯನ್ನು ತಿಳಿಯುವ ಅವಕಾಶ ಮತ್ತು ಬೆಳೆಯುವ ಅವಕಾಶ ಮತ್ತು ಸಸಿ ಪಡೆಯುವ ಅವಕಾಶ , ಕ್ಷೇತ್ರದ ಆವರಣದಲ್ಲಿ ದೊರಕಿದ್ದು ರೈತರ ಪಾಲಿನ ಅದೃಷ್ಟ ಎಂದರು.ಮಲ್ಲಿಗೆ ಕೃಷಿ ಬೆಳೆಯುವ ಎಲ್ಲ ರೈತರಿಗೂ ಲಾಭದಾಯಕವಾಗಲಿ ಎಂದು ಹಾರೈಸಿದರು.
ಶಾಸಕರು ಹಲವು ಕೃಷಿ  ಯೋಜನೆಗಳ ಸಹಾಯಧನ ರೈತರಿಗೆ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ತೋಟಗಾರಿಕಾ ವಿಜ್ಞಾನಿಗಳು, ಸಹಾಯಕ ತೋಟಗಾರಿಕಾ ಅಧಿಕಾರಿಗಳು, ವಲಯ ತೋಟಗಾರಿಕಾ ಅಧಿಕಾರಿಗಳು, ಹೋಬಳಿ ತೋಟಗಾರಿಕಾ ಅಧಿಕಾರಿಗಳು ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕಾರ್ಯಕ್ರಮದ ಆಯೋಜಕರು ಹಾಗೂ ಕೃಷಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು