6:32 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಸಿಎ ಪದವಿಯನ್ನು ಪಡೆದ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ

28/02/2022, 22:10

ಮಂಗಳೂರು(reporterkarnataka.com); ಡಿಸೆಂಬರ್ 2021ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಗೋಕುಲ್ ಪೈ, ಪೂರ್ಣಿಮಾ ರಾವ್ ಹಾಗೂ ಸಂಜನಾ ಪೈ ಅವರಿಗೆ  ಸನ್ಮಾನ ಮಾಡಲಾಯಿತು.

“ನಾವು ನಿಷ್ಠಾವಂತರು ಮತ್ತು ಶ್ರಮದಾಯಕರಾಗಿದ್ದರೆ  ಏನನ್ನೂ ಸಾಧಿಸಬಹುದು. ನಮ್ಮಲ್ಲಿ ಆತ್ಮವಿಶ್ವಾಸ , ದೇವರಲ್ಲಿ ನಂಬಿಕೆ ಮತ್ತು ಭಕ್ತಿ ಇದ್ದರೆ ಯಾವ ಎತ್ತರಕ್ಕಾದರೂ ನಾವು ತಲುಪಬಹುದು. ಮೊದಲಾಗಿ ನಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಬೇಕು ಮತ್ತು ನಾವು ಮಾಡುವ ಕಾರ್ಯದಲ್ಲಿ ನಂಬಿಕೆ ಇರುವುದು ಮುಖ್ಯ” ಎಂದು ಕಾಲೇಜಿನ ಸಂಚಾಲಕ  ಸಿಎ ಜಗನ್ನಾಥ ಕಾಮತ್ ನುಡಿದರು.


ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲಾ ಕಾಮತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಶ್ರೀ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ಮಿತಾ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು