2:42 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

25/12/2022, 20:57

ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ಕಾಟಿಪಳ್ಳ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ‌. ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ತನಿಖೆ ನಡೆಯಲಿದೆ ಎಂದು ಅವರು ನುಡಿದರು.
ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ನಾನು ಆಗಮಿಸಿದ್ದೇನೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಕ್ಜಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸುವಲ್ಲಿ ಬಹಳ ಅಗತ್ಯ. ರಾಜ್ಯದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ಅಧಿವೇಶನ ನಡೆಯುತ್ತಿದ್ದರೂ ಪೂರ್ವ ನಿಗದಿತ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ ಎಂದು ಸಿಎಂ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು