3:52 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

25/12/2022, 20:57

ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ಕಾಟಿಪಳ್ಳ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ‌. ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ತನಿಖೆ ನಡೆಯಲಿದೆ ಎಂದು ಅವರು ನುಡಿದರು.
ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ನಾನು ಆಗಮಿಸಿದ್ದೇನೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಕ್ಜಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸುವಲ್ಲಿ ಬಹಳ ಅಗತ್ಯ. ರಾಜ್ಯದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ಅಧಿವೇಶನ ನಡೆಯುತ್ತಿದ್ದರೂ ಪೂರ್ವ ನಿಗದಿತ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ ಎಂದು ಸಿಎಂ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು