11:28 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಕಾಟಿಪಳ್ಳ 3ನೇ ವಾರ್ಡ್: 1.70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ; ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ

27/03/2023, 11:10

ಸುರತ್ಕಲ್(reporterkarnataka.com): ಸುಮಾರು1.70 ಕೋಟಿ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ‌ 3ನೇ ವಾರ್ಡ್‌ನಲ್ಲಿ ಗುದ್ದಲಿ ಪೂಜೆ‌ ಹಾಗೂ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗಣೇಶಪುರ ಮೈದಾನದ ಬಳಿ ಉದ್ಯಾನವನಕ್ಕೆ ಗುದ್ದಲಿ ಪೂಜೆ, 2 ನೇ ವಿಭಾಗ ಸರಕಾರಿ ಶಾಲೆಯ ಮುಂದುವರಿದ ಕೊಠಡಿ ನಿರ್ಮಾಣಕ್ಕೆ ಗುದ್ದಲಿ‌ ಪೂಜೆ, ಆದರ್ಶ ಯುವಕ‌ ಮಂಡಲ(ರಿ) ಕಟ್ಟಡ ಮೇಲ್ವಾಚಾವಣಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ಆದಿಶಕ್ತಿ ದೇವಸ್ಥಾನ ದಿಂದ ಹಿಂದೂ ರುದ್ರಭೂಮಿಯ ಮುಖ್ಯರಸ್ತೆಯ ಕಾಂಕ್ರೀಟಿಕರಣದ ಲೋಕಾರ್ಪಣೆ, ಕಾಟಿಪಳ್ಳ‌ ಹಿಂದೂ‌ ರುದ್ರಭೂಮಿಯ ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು.
ಮೇಯರ್ ಜಯಾನಂದ ಅಂಚನ್‌, ಕಾಟಿಪಳ್ಳ‌ 3ನೇ ವಾರ್ಡ್ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, 6ನೇ ವಾರ್ಡ್ ಮನಪಾ ಸದಸ್ಯರಾದ ಸರಿತಾ ಶಶಿಧರ್ , ಬಿಜೆಪಿ ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್‌ರಾಜ್ ಕೃಷ್ಣಾಪುರ, ಅ.ಭಾ.ಸೇ.ಟ್ರಸ್ಟ್ ನ ಅಧ್ಯಕ್ಷ
ಜಯಕುಮಾರ್, ಹಿಂದು ರುದ್ರಭೂಮಿ ನವೀಕರಣ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರಾದ ನವಿನ್ ಶೆಟ್ಟಿ ಮತ್ತು ಪದ್ಮನಾಭ ಸಾಲ್ಯಾನ್ ಹಾಗೂ ವಿವಿಧ‌ ಜವಾಬ್ದಾರಿಯುತ ಮಂಡಲ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ವಾರ್ಡ್ ಪ್ರಮುಖರು, ಬೂತ್ ಪ್ರಮುಖರು, ಪಕ್ಷದ ಕಾರ್ಯಕರ್ತರು, ಊರಿನ ಜವಬ್ದಾರಿಯುತ ನಾಗರಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು