12:12 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಾಟಿಪಳ್ಳ 3ನೇ ವಾರ್ಡ್: 1.70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ; ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ

27/03/2023, 11:10

ಸುರತ್ಕಲ್(reporterkarnataka.com): ಸುಮಾರು1.70 ಕೋಟಿ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ‌ 3ನೇ ವಾರ್ಡ್‌ನಲ್ಲಿ ಗುದ್ದಲಿ ಪೂಜೆ‌ ಹಾಗೂ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗಣೇಶಪುರ ಮೈದಾನದ ಬಳಿ ಉದ್ಯಾನವನಕ್ಕೆ ಗುದ್ದಲಿ ಪೂಜೆ, 2 ನೇ ವಿಭಾಗ ಸರಕಾರಿ ಶಾಲೆಯ ಮುಂದುವರಿದ ಕೊಠಡಿ ನಿರ್ಮಾಣಕ್ಕೆ ಗುದ್ದಲಿ‌ ಪೂಜೆ, ಆದರ್ಶ ಯುವಕ‌ ಮಂಡಲ(ರಿ) ಕಟ್ಟಡ ಮೇಲ್ವಾಚಾವಣಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ಆದಿಶಕ್ತಿ ದೇವಸ್ಥಾನ ದಿಂದ ಹಿಂದೂ ರುದ್ರಭೂಮಿಯ ಮುಖ್ಯರಸ್ತೆಯ ಕಾಂಕ್ರೀಟಿಕರಣದ ಲೋಕಾರ್ಪಣೆ, ಕಾಟಿಪಳ್ಳ‌ ಹಿಂದೂ‌ ರುದ್ರಭೂಮಿಯ ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು.
ಮೇಯರ್ ಜಯಾನಂದ ಅಂಚನ್‌, ಕಾಟಿಪಳ್ಳ‌ 3ನೇ ವಾರ್ಡ್ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, 6ನೇ ವಾರ್ಡ್ ಮನಪಾ ಸದಸ್ಯರಾದ ಸರಿತಾ ಶಶಿಧರ್ , ಬಿಜೆಪಿ ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್‌ರಾಜ್ ಕೃಷ್ಣಾಪುರ, ಅ.ಭಾ.ಸೇ.ಟ್ರಸ್ಟ್ ನ ಅಧ್ಯಕ್ಷ
ಜಯಕುಮಾರ್, ಹಿಂದು ರುದ್ರಭೂಮಿ ನವೀಕರಣ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರಾದ ನವಿನ್ ಶೆಟ್ಟಿ ಮತ್ತು ಪದ್ಮನಾಭ ಸಾಲ್ಯಾನ್ ಹಾಗೂ ವಿವಿಧ‌ ಜವಾಬ್ದಾರಿಯುತ ಮಂಡಲ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ವಾರ್ಡ್ ಪ್ರಮುಖರು, ಬೂತ್ ಪ್ರಮುಖರು, ಪಕ್ಷದ ಕಾರ್ಯಕರ್ತರು, ಊರಿನ ಜವಬ್ದಾರಿಯುತ ನಾಗರಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು