3:29 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ: ಕೇಸು ದಾಖಲಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

02/08/2024, 20:56

ಮಂಗಳೂರು(reporterkarnataka.com):ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕ ಸಮಸ್ಯೆ ಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ.ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿಪಂ ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು