6:54 AM Sunday14 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾಪು: ಆ್ಯಂಬುಲೆನ್ಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿ ಸಾವು; ಚಾಲಕನಿಗೂ ಸಣ್ಣಪುಟ್ಟ ಗಾಯ

07/11/2021, 07:58

ಉಡುಪಿ(reporterkarnataka.com): ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪುವಿನ ಕೋತಲ್ ಕಟ್ಟೆಯ‌ ರಾ.ಹೆ. 66ರಲ್ಲಿ‌‌ ಇಂದು ನಡೆದಿದೆ.

ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಗೋವಿಂದ ಪೂಜಾರಿ ರಸ್ತೆ ದಾಟಲು ನಿಂತಿದ್ದರು. ಈ ವೇಳೆ ಅವರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಘಟನೆಯಲ್ಲಿ ಆ್ಯಂಬುಲೆನ್ಸ್ ಚಾಲಕ ಮಣಿ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು