2:51 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕಾವೇರಿ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ

21/09/2023, 19:44

ಹೊಸದಿಲ್ಲಿ(reporterkarnataka.com): ಕಾವೇರಿ ನದಿ ನೀರು ಹಂಚಿಕೆ ಕುರಿತು ವಿವಾದ ಮತ್ತೆ ಗರಿಗೆದರಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರಾಜ್ಯದ ಮನವಿಯನ್ನು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಆದರೆ ಕರ್ನಾಟಕದ ಅರ್ಜಿಯನ್ನು ಸುಪ್ರೀಂಕೋರ್ಟ್
ತಿರಸ್ಕರಿಸಿದೆ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಕೂಡ ಪೀಠ ನಿರಾಕರಿಸಿದೆ. ಇದಲ್ಲದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದೂ ಸೂಚಿಸಿದೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು