4:28 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಕವಿ, ಶಿಕ್ಷಕ, ಸಂಪಾದಕ ನಾರಾಯಣ ರೈ ಕಕ್ಕುವಳ್ಳಿಗೆ ಸನ್ಮಾನ: ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ

06/12/2022, 10:59

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇಲ್ಲಿನ ಮಾಧುರಿ ಸೌಧ ಸಭಾಂಗಣದಲ್ಲಿ ಭಾನುವಾರ ಜರಗಿದ ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿಯ ಸಮಾರಂಭದಲ್ಲಿ ಹಿರಿಯ ಕವಿ, ನಿವೃತ್ತ ಶಿಕ್ಷಕ , ಮಧುಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಅಭಿನಂದನಾ ಭಾಷಣ ಮಾಡಿದರು. 40 ವರ್ಷ ಶಿಕ್ಷಕರಾಗಿ, ಪತ್ರಿಕೆಯಲ್ಲಿ ಅಂಕಣಕಾರರಾಗಿ ಗುರುತಿಸಲ್ಪಟ್ಟಿದ್ದಾರೆ. ಉತ್ತಮ ವ್ಯಂಗ್ಯ ಚಿತ್ರಕಾರರಾಗಿ , ಕಲಾವಿದನಾಗಿ, ಕವಿಯಾಗಿ ಸಾಧನೆ ಮಾಡಿದ ಕುಕ್ಕುವಳ್ಳಿಯವರು ಮಧು ಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು . ಸಭಾಧ್ಯಕ್ಷ ಹಿರಿಯ ಪತ್ರಕರ್ತ ವಿ.ಬಿ. ಅರ್ತಿಕಜೆ ರವರು ಕುಕ್ಕುವಳ್ಳಿಯವರ ಸಾಧನೆಯ ಬಗ್ಗೆ ಅಭಿನಂದಿಸಿ ಶುಭ ಹಾರೈಸಿ ಕಕ್ಕುವಳ್ಳಿಯವರ ಸರಳ ವ್ಯಕ್ತಿತ್ವವನ್ನು ಕೊಂಡಾಡಿದರು. ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರ ಕಾರ್ಯವೈಖರಿಯ ಬಗ್ಗೆ ತಿಳಿಸಿ ಜೇನು ಸಂಘದ ಸ್ಮರಣಿಕೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತಿನ ಅಧ್ಯಕ್ಷ ಉಮೇಶ್ ನಾಯಕ್ ಕನ್ನಡ ಶಾಲು ಹಾಕಿ ಗೌರವಿಸಿ ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ ಮಾಡಿದರು. ಕೇಂದ್ರ ಕನ್ನಡ ಸಾಹಿತ್ಯ ಜಿಲ್ಲಾಧ್ಯಕ್ಷ ಡಾ.ಸುರೇಶ್ ನೆಗಳಗುಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಮುದ್ರವಳ್ಳಿ ವಾಸು, ಪಿಂಗಾರ ಸಾಹಿತ್ಯ ಬಳಗದ ಸಂಚಾಲಕ ರೈಮಂಡ್ ಡಿಕುನ್ಹ ಕವಿಗೋಷ್ಠಿಗೆ ಚಾಲನೆ ನೀಡಿ 50 ಕವಿಗಳು ಸ್ವರಚಿತ ಕವನ ವಾಚಿಸಿದರು, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಶುಭ ಹಾರೈಸಿದರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷೆ ಶಾಂತ ಪುತ್ತೂರು ಸ್ವಾಗತಿಸಿ ಪ್ರಸ್ತಾವನೆ ಗೈದರು. ಅಪೂರ್ವ ಕಾರಂತ್ ನಿರೂಪಿಸಿ, ಜಿ.ಪಿ. ಶಾಂ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು