1:54 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕವಿ, ಶಿಕ್ಷಕ, ಸಂಪಾದಕ ನಾರಾಯಣ ರೈ ಕಕ್ಕುವಳ್ಳಿಗೆ ಸನ್ಮಾನ: ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ

06/12/2022, 10:59

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇಲ್ಲಿನ ಮಾಧುರಿ ಸೌಧ ಸಭಾಂಗಣದಲ್ಲಿ ಭಾನುವಾರ ಜರಗಿದ ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿಯ ಸಮಾರಂಭದಲ್ಲಿ ಹಿರಿಯ ಕವಿ, ನಿವೃತ್ತ ಶಿಕ್ಷಕ , ಮಧುಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಅಭಿನಂದನಾ ಭಾಷಣ ಮಾಡಿದರು. 40 ವರ್ಷ ಶಿಕ್ಷಕರಾಗಿ, ಪತ್ರಿಕೆಯಲ್ಲಿ ಅಂಕಣಕಾರರಾಗಿ ಗುರುತಿಸಲ್ಪಟ್ಟಿದ್ದಾರೆ. ಉತ್ತಮ ವ್ಯಂಗ್ಯ ಚಿತ್ರಕಾರರಾಗಿ , ಕಲಾವಿದನಾಗಿ, ಕವಿಯಾಗಿ ಸಾಧನೆ ಮಾಡಿದ ಕುಕ್ಕುವಳ್ಳಿಯವರು ಮಧು ಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು . ಸಭಾಧ್ಯಕ್ಷ ಹಿರಿಯ ಪತ್ರಕರ್ತ ವಿ.ಬಿ. ಅರ್ತಿಕಜೆ ರವರು ಕುಕ್ಕುವಳ್ಳಿಯವರ ಸಾಧನೆಯ ಬಗ್ಗೆ ಅಭಿನಂದಿಸಿ ಶುಭ ಹಾರೈಸಿ ಕಕ್ಕುವಳ್ಳಿಯವರ ಸರಳ ವ್ಯಕ್ತಿತ್ವವನ್ನು ಕೊಂಡಾಡಿದರು. ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರ ಕಾರ್ಯವೈಖರಿಯ ಬಗ್ಗೆ ತಿಳಿಸಿ ಜೇನು ಸಂಘದ ಸ್ಮರಣಿಕೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತಿನ ಅಧ್ಯಕ್ಷ ಉಮೇಶ್ ನಾಯಕ್ ಕನ್ನಡ ಶಾಲು ಹಾಕಿ ಗೌರವಿಸಿ ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ ಮಾಡಿದರು. ಕೇಂದ್ರ ಕನ್ನಡ ಸಾಹಿತ್ಯ ಜಿಲ್ಲಾಧ್ಯಕ್ಷ ಡಾ.ಸುರೇಶ್ ನೆಗಳಗುಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಮುದ್ರವಳ್ಳಿ ವಾಸು, ಪಿಂಗಾರ ಸಾಹಿತ್ಯ ಬಳಗದ ಸಂಚಾಲಕ ರೈಮಂಡ್ ಡಿಕುನ್ಹ ಕವಿಗೋಷ್ಠಿಗೆ ಚಾಲನೆ ನೀಡಿ 50 ಕವಿಗಳು ಸ್ವರಚಿತ ಕವನ ವಾಚಿಸಿದರು, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಶುಭ ಹಾರೈಸಿದರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷೆ ಶಾಂತ ಪುತ್ತೂರು ಸ್ವಾಗತಿಸಿ ಪ್ರಸ್ತಾವನೆ ಗೈದರು. ಅಪೂರ್ವ ಕಾರಂತ್ ನಿರೂಪಿಸಿ, ಜಿ.ಪಿ. ಶಾಂ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು